ಆನೆಗುಂದಿ ಗ್ರಾಮದಲ್ಲಿ ಇಬ್ಬರು ಯುವಕರು ಈಜಾಡಲು ತೆರಳಿ ಕೃಷಿ ಹೊಂಡದಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಪೊಲೀಸರು ಸಂಜೆ ರವಾನಿಸಲಾಗಿದ್ದು, ಈ ಸಂದರ್ಭದಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು.ಘಟನೆಯ ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ವಶಕ್ಕೆ ಪಡೆದು ಹನೂರು ಪಟ್ಟಣದ ಶವಗಾರಕ್ಕೆ ರವಾನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

