ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎಂಬ ಚಿಕ್ಕ ಹೋಟೆಲ್ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈ ಹೋಟೆಲ್ನಲ್ಲಿ ನಾನ್-ವೆಜ್ ಅಡುಗೆಯಲ್ಲಿ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ತಿಂದ ಬಿರಿಯಾನಿಯಲ್ಲಿ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ.ಘಟನೆಯ ಸುದ್ದಿ ತಿಳಿದು ಪಾಂಡವಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆರೋಪಿ ಆಜಾದ್ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಈಗ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

