ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ತಿಂಗಳ ಮಾಮೂಲಿ ಹಣ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಲೋಕಾಯುಕ್ತ ವಿಭಾಗ ಭರ್ಜರಿ ದಾಳಿ ನಡೆಸಿದ್ದು, ಠಾಣೆಯ ಸಿಬ್ಬಂದಿ ಹಾಗೂ ಪಿಎಸ್ಐ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ .ಸೋಮವಾರ ನಡೆದ ದಾಳಿಯ ವೇಳೆ ಬಾರ್ ಮಾಲೀಕ ಪ್ರಶಾಂತ್ ಎಂಬವರಿಂದ ₹10,000 ಲಂಚ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಪೇದೆ ಸುರೇಶ್ ತಕ್ಷಣವೇ ಬಲೆಗೆ ಬಿದ್ದಿದ್ದಾರೆ.
