ಬಿಬಿಎಂಪಿ ಅಗೆದ ರಸ್ತೆಯಿಂದ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಿತಿ ಗಂಭೀರವಾಗಿದ್ದು, ರಸ್ತೆ ಪಕ್ಕದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಹಿನ್ನಲೆ ಈ ಅವಘಡ ಸಂಭವಿಸಿದೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ.ಕೂಡಲೇ ಮಂಜುನಾಥ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ಸಂಬಂಧ ಬಿಬಿಎಂಪಿ ಜಲಮಂಡಳಿ ಹಾಗೂ ಗುತ್ತಿಗೆದಾರನ ವಿರುದ್ಧ ರಾಜಾಜಿನಗರ ಸಂಚಾರ ಠಾಣೆಯಲ್ಲಿ ಯುವಕನ ಪೋಷಕರು ದೂರು ನೀಡಿದ್ದು, ದೂರಿನ ಅನ್ವಯ ಎಫ್.ಐ.ಆರ್ ದಾಖಲಿಸಲಾಗಿದೆ. ಕಾಮಗಾರಿಯಿಂದ ನಮಗೆ ಬಹಳ ಸಮಸ್ಯೆಯಾಗಿದೆ ಇಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

