ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶಂಭುಲಿಂಗನನ್ನು ಬಂಧಿಸಿದ್ದಾರೆ.ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆರೋಪಿಯನ್ನು ಬಂಧಿಸಿ ಆತನಿಂದ ಒಟ್ಟು ರೂ. 2,600/- ಮೌಲ್ಯದ ವಿವಿಧ ಬ್ರ್ಯಾಂಡ್ ನ ಮದ್ಯದ ಸಾಚೇಟ್ ಮತ್ತು ನಗದು ರೂ. 3,960/-ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

