Breaking News

ಹೊಸಕೋಟೆ: ರಸ್ತೆ ನಿರ್ಮಾಣಕ್ಕೆ ಭೂಮಿ ಕೊಟ್ಟವರಿಗೆ ರಸ್ತೆ ಇಲ್ಲ!

ನೆಲಮಂಗಲ ತಾಲ್ಲೂಕಿನ ದಾಬಸ್‌ಪೇಟೆಯಿಂದ ತಮಿಳುನಾಡಿನ ಹೊಸೂರು ವರೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ-207 ನಿರ್ಮಾಣಕ್ಕೆ ಭೂಮಿ ನೀಡಿದ ರೈತರು ಓಡಾಡಲು ರಸ್ತೆ ಇಲ್ಲದೆ ದಿಕ್ಕು ತೋಚದಂತಾಗಿದೆ.ದಾಬಸ್‌ಪೇಟೆಯಿಂದ ಹೊಸೂರು ವರೆಗೆ ನಿರ್ಮಾಣವಾಗುತ್ತಿರುವ ರಸ್ತೆ ಉದ್ದ ಒಟ್ಟು 139 ಕಿಲೋಮೀಟರ್. ಇದರಲ್ಲಿ ಸುಮಾರು 122 ಕಿಲೋಮೀಟರ್‌ ರಾಜ್ಯದಲ್ಲೇ ಹಾದು ಹೋಗುತ್ತದೆ. ಹೆದ್ದಾರಿಯಿಂದ ರಾಜ್ಯದ ಸಾರಿಗೆ ಸಂಪರ್ಕಕ್ಕೆ ವೇಗ ಸಿಗುತ್ತದೆ. ಆದರೆ ಸ್ಥಳೀಯರಿಗೆ ಅನುಕೂಲ ಆಗುವಂತ ಸರ್ವಿಸ್‌ ರಸ್ತೆ ನಿರ್ಮಿಸದೆ ಇರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.ರೈತರ ಅನುಕೂಲಕ್ಕಾಗಿ ಸರ್ವೀಸ್ ರಸ್ತೆ ನಿರ್ಮಿಸಬೇಕೆಂದು ಸಂಸದ ಶಾಸಕ ಕೇಂದ್ರ ಹೆದ್ದಾರಿ ಮಂತ್ರಿಗಳ ಆದಿಯಾಗಿ ಎಲ್ಲರನ್ನೂ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *