ಕರಾವಳಿ: ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸೇತುವೆಗಳು ತುಂಬಿ ಹರಿಯುತ್ತಿದ್ದು, ಬೈಕ್ ಸವಾರರು ದಾಟಲು ಯತ್ನಿಸಿ ಕೊಚ್ಚಿಕೊಂಡು ಹೋಗಿರುವ ಘಟನೆ ಒಡಾಕೆರೆ ಬಳಿ ನಡೆದಿದೆ.ಅಪಾಯಮಟ್ಟದಲ್ಲಿ ಸೇತುವೆ ಮೇಲೆ ಮಳೆ ನೀರು ರಭಸದಿಂದ ಹರಿಯುತ್ತಿದ್ದರೂ ಬೈಕ್ ಮೇಲೆ ದಾಟಲು ಯತ್ನಿಸಿದ ಇಬ್ಬರೂ ನೀರಿ ಹೊಡೆತಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರು ಸವಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮೊಬೈಲ್ನಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

