ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ರವೀಂದ್ರ ಕಾಶಪ್ಪ ಅವರು ಪ್ರಸ್ತುತ ಬೆಳಗಾವಿ ವಲಯದ ಡಿಸಿಆರ್ಇ ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರು ತಮ್ಮ ಪತ್ನಿ, ಸಂಬಂಧಿಕರು ಹಾಗೂ ಬೇನಾಮಿ ಹೆಸರಿನಲ್ಲಿ ಕೃಷಿ ಜಮೀನು ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿದ್ದಾರೆ ಎಂದು ದೂರಲಾಗಿದೆ.ಇವರ ಕುಟುಂಬ ಸದಸ್ಯರು ಸಹಕಾರ ಸಂಘವನ್ನು ಕೂಡ ಆರಂಭಿಸಿ ನಿಯಮ ಬಾಹಿರವಾಗಿ ಸಾಲ ನೀಡಿಕೆ ಹಾಗೂ ಹೂಡಿಕೆ ಮಾಡಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ಮಂಜೂರು ಮಾಡುವಂತೆ ವಿನೋದ್ ಚಕ್ರವರ್ತಿ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

