ಅಭಿಜ್ಞಾ (8) ಅವನಿ (6) ಆರ್ಯ (4) ಎಂಬ ಮಕ್ಕಳ ಜೊತೆಗೆ ತಾಯಿ ಸಿದ್ದಮ್ಮ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಸಿದ್ದಮ್ಮ ಹಾರಿದ್ದಾಳೆ. ಸಂಜೆಯಾದರೂ ಕುರಿಗಳು ಮತ್ತು ಪತ್ನಿ ಮಕ್ಕಳು ಹಿಂದಿರುಗದ ಹಿನ್ನೆಲೆಯಲ್ಲಿ ಪತಿ ಕುಮಾರ್ ಹುಡುಕಾಟ ನಡೆಸಿದ್ದಾನೆ. ಕೃಷಿ ಹೊಂಡದ ಬಳಿಗೆ ನಿಂತಿದ್ದ ಕುರಿಗಳನ್ನು ನೋಡಿ ಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿ ಮಕ್ಕಳು ಕಾಣದಿದ್ದಾಗ ಕೃಷಿ ಹೊಂಡದಲ್ಲಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ತಕ್ಷಣ ಕುಮಾರ್ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ.ಸಿದ್ದಮ್ಮ ಸಹೋದರನ ದೂರಿನ ಅನ್ವಯ ಕುರುಗೋಡು ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

