ಮಂಗಳವಾರ ತಡರಾತ್ರಿ ರಾತ್ರಿ 11.30 ರ ಸುಮಾರಿಗೆ ಡಾಬಾಗೆ ನುಗ್ಗಿದ ಸುಮಾರು 8-10 ದುಷ್ಕರ್ಮಿಗಳು ಮಾಲೀಕ ಮತ್ತು ನೌಕರರು ಕೆಲಸ ಮಾಡುತ್ತಿದ್ದಾಗ ಮೂವರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಮೃತರನ್ನು ಡಾಬಾದ ಮಾಲೀಕರು ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ.ಕಲಬುರಗಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

