ಕಟ್ಟಡ ನಕ್ಷೆ ಮಂಜೂರು, ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ, ಅನುಮತಿ ಇಲ್ಲದೆ ಜನರು ಮನೆ ಕಟ್ಟಬಾರದು’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಅಕ್ರಮ-ಸಕ್ರಮ ಮಸೂದೆ ತರಬಹುದಲ್ಲವೇ ಎಂದು ಕೇಳಿದಾಗ, ‘ಸುಪ್ರೀಂ ಕೋರ್ಟ್ ಈಗಾಗಲೇ ಇದಕ್ಕೆ ತಡೆ ನೀಡಿದೆ. ನಮ್ಮ ಸರ್ಕಾರ ‘ಎ’ ಖಾತಾ, ‘ಬಿ’ ಖಾತಾ ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದೆ. ನಾವು 110 ಹಳ್ಳಿಗಳಿಗೆ ನೀರಿನ ಸಂಪರ್ಕ ನೀಡಲು ಮುಂದಾಗಿದ್ದೆವು. ಈ ತೀರ್ಪಿನ ನಂತರ ಜಲಮಂಡಳಿಗೆ ತೊಂದರೆಯಾಗಿದೆ. ಕಳೆದ ವರ್ಷ ಜೂನ್ ತಿಂಗಳಲ್ಲಿ 39 ಸಾವಿರ ನೀರಿನ ಸಂಪರ್ಕ ನೀಡಿದ್ದೆವು. ಈ ವರ್ಷ ಕೇವಲ 300 ಸಂಪರ್ಕ ನೀಡಿದ್ದೇವೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

