ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

