ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ಮಾನವೀಯತೆ ಮರೆತ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ. ಮಗಳು ಕುತ್ತಿಗೆ ಹಿಸುಕಿದಾಗ ಪ್ರಜ್ಞೆ ತಪ್ಪಿ ಬಿದ್ದಾಗ ಸತ್ತಿದ್ದಾಳೆಂದು ಕಾಡಿನಲ್ಲಿ ಬಿಟ್ಟು ಬಂದಾಗ ನಂತರ ಪ್ರಜ್ಞೆ ಬಂದು ಸಹಾಯಕ್ಕಾಗಿ ರಸ್ತೆಗೆ ಬಂದು ಬೇಡಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.ಗಂಭೀರ ಘಟನೆಯ ಹಿನ್ನೆಲೆಯಲ್ಲಿ ಸೊರಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಶಿರಾಳಕೊಪ್ಪ ಸಮೀಪದ ಮಳವಳ್ಳಿ ತಾಂಡಾದ ನಿವಾಸಿ ಧರ್ಮನಾಯ್ಕನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

