ಸದಾಶಿವನಗರದಲ್ಲಿ ನಡೆದ ಬೆಳಗಿನ ಜಾವದಲ್ಲಿ ನಡೆದ ಘಟನೆಯೊಂದು ಭಾರೀ ಸದ್ದು ಮಾಡುತ್ತಿದೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಹಿಡಿದು ಕಾರ್ಮಿಕರಿಗೆ ಬೆದರಿಕೆ ಹಾಕಿ ರಂಪಾಟ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಜಯಪ್ರಕಾಶ್ ಎಂಬವರು ಏಕಾಏಕಿ ಡಬಲ್ ಬ್ಯಾರೆಲ್ ಗನ್ ಹಿಡಿದು ಹೊರಬಂದರು. ಲಾರಿ ಚಾಲಕನಿಗೆ ಗನ್ ತೋರಿಸಿ, ‘ಇಲ್ಲಿ ಏಕೆ ಬಂದೆ ಮಗನೇ? ಫುಲ್ ಅವಾಜ್ ಹಾಕುತ್ತಾ ಏನು ಈ ಕಡೆ?’ ಎಂದು ಧಮ್ಕಿ ಹಾಕಿದರು.ಭೀತಿಯಿಂದ ಜನ ಕೆಲ ಕಾಲ ರಸ್ತೆಯ ಬದಿಯಲ್ಲಿ ಸಂಚಾರ ಮಾಡುವುದನ್ನೇ ನಿಲ್ಲಿಸಿದ್ದರು. ಇನ್ನು ಸರ್ಕಾರದ ರಕ್ಷಣಾ ವಿಭಾಗದ ನಿವೃತ್ತ ಅಧಿಕಾರಿಯೊಬ್ಬರು ಕಾನೂನು ಕೈಗೆ ತೆಗೆದುಕೊಂಡ ವರ್ತನೆಗೆ ಕಟ್ಟುನಿಟ್ಟಿನ ಕ್ರಮ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

