ಮದುವೆಯಾಗಿ ತಿಂಗಳುಗಳೇ ಕಳೆದರೂ ಹಣ ವಾಪಸ್ ನೀಡಿರಲಿಲ್ಲ.. ಇದರಿಂದ ಬೇಸತ್ತ ವೆಂಕಟರಮಣಿ ತಾನೇ ಹೋಗಿ ಕೊಟ್ಟ ಹಣ ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ ಈ ವೇಳೆ ಪಾರ್ವತಿ ಹಾಗೂ ಆಕೆಯ ಮಗಳು ರಂಪಾಟ ಮಾಡಿದ್ದರು.ಇದನ್ನು ಕೇಳಿದ ಆರೋಪಿ ಸುಬ್ರಮಣಿ ಏಕಾಏಕಿ ವೆಂಕಟರಮಣಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೆಂಕಟರಮಣಿಯವರ ಮಗ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಘಟನೆಗೆ ಸಂಬಂಧ ಪಟ್ಟಂತೆ ಸುಬ್ರಮಣಿ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

