ಫಾರೆಸ್ಟ್ ಗಾರ್ಡ್ ಶರತ್ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿತ್ತು. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದರು. ಆದರೆ ಅವರ ಸುಳಿವೇ ಇರಲಿಲ್ಲ. ಇದೀಗ ಅವರು ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

