ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ.ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

