ಕಂದಾಯ ಇಲಾಖೆ ಗ್ರಾಮಲೆಕ್ಕಿಗನ ಸಹಾಯಕನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಗೊಂಡಿರುವ 65 ವರ್ಷದ ರಾಮಯ್ಯ ತೈಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಪಕ್ಕದ ಮನೆ ನಿವಾಸಿ ರಾಮಯ್ಯ ಆಕೆಯೊಂದಿಗೆ ಆಟವಾಡುವ ನೆಪದಲ್ಲಿ ತನ್ನ ಮನೆಗೆ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ನಂತರ ಬಾಲಕಿಯ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು ವಿಚಾರಣೆ ನಡೆಸಿದಾಗ ವೃದ್ಧನ ಪೈಶಾಚಿಕ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

