ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಚ್ ಒಡಿ ಹಿಂಸೆಗೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.ನೊಂದ ವಿದ್ಯಾರ್ಥಿನಿ ಬೇರೆ ದಾರಿ ಕಾಣದೆ ಕಾಲೇಜಿನ ಪ್ರಾಂಶುಪಾಲರ ಕೊಠಡಿ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾಳೆ. ಶೇ.೯೫ರಷ್ಟು ಭಾಗ ಸುಟ್ಟು ಹೋಗಿದೆ. ಆಕೆಯನ್ನು ರಕ್ಷಿಸಲು ಹೋದ ಮತ್ತೋರ್ವ ವಿದ್ಯಾರ್ಥಿನಿಗೂ ಸುಟ್ಟ ಗಾಯಗಳಾಗಿವೆ. ಆಕೆಗೂ ಶೇ.೭೦ರಷ್ಟು ಭಾಗ ಸುಟ್ಟಿದೆ. ಇಬ್ಬರನ್ನೂ ಭುವನೇಶ್ವರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದೆ.
ಪ್ರಕರನದಾಖಲಿಸಿಕೊಂಡಿರುವ ಒಡಿಶಾ ಪೊಲೀಸರು ಆರೋಪಿ ಸಮೀರ್ ಕುಮಾರ್ ಸಾಹೋನನ್ನು ಹಾಗೂ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾಲೇಜು ಪ್ರಾಂಶುಪಾಲ ದಿಲೀಪ್ ಕುಮಾರ್ ಘೋಷ್ ನನ್ನು ಬಂಧಿಸಿದ್ದಾರೆ. ಇಬ್ಬರನ್ನೂ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

