ಬೆಂಗಳೂರು ಟು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಜಯಪುರಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ.ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

