Breaking News

ಬಾಗಲಕೋಟೆ: ಪಂಚಮಸಾಲಿ ಪೀಠದ ಕಟ್ಟಡಕ್ಕೆ ಬೀಗ!!

ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ಗೆ ಸೇರಿದ ಪಂಚಮಸಾಲಿ ಪೀಠ ಬಸವ ಜಯಮೃತ್ಯುಂಜಯ ಸ್ವಾಮಿ ಇರುವ ಪೀಠದ ಕಟ್ಟಡದ ಗೇಟಿಗೆ ಭಾನುವಾರ ರಾತ್ರಿ ಬೀಗ ಹಾಕಲಾಗಿದೆ. ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಪೀಠದ ಕಟ್ಟಡದ ಪ್ರವೇಶ, ಹಿಂಬದಿ ದ್ವಾರ ಮತ್ತು ಮೇಲ್ಭಾಗದ ಕೊಠಡಿಗೆ ತೆರಳಲು ಇದ್ದ ದಾರಿಯಲ್ಲಿ ಗೇಟ್‌ ಅಳವಡಿಸಿ, ಬೀಗ ಹಾಕಲಾಗಿದೆ.ಮಠದಲ್ಲಿ ಅಹಿತಕರ ಚಟುವಟಿಕೆಗಳು ನಡೆಯದಿರಲಿ ಎಂಬ ಉದ್ದೇಶದಿಂದ ಗೇಟ್ ಮಾಡಿಸಿ, ಬೀಗ ಹಾಕಲಾಗಿದೆ. ಮಠದ ಟ್ರಸ್ಟ್ ಅಧ್ಯಕ್ಷನಾಗಿರುವ ಕಾರಣ ಮಠದ ಸುರಕ್ಷತೆ ನನ್ನ ಜವಾಬ್ದಾರಿ. ಸ್ವಾಮೀಜಿಗೆ ಹೇಳಿ ಮಾಡುವಂತದ್ದಲ್ಲ. ಭದ್ರತೆ ದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ’ ಎಂದು ಟ್ರಸ್ಟ್‌ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *