ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

