ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ.ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ ಪಡೆದಿದ್ದಾರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದು, ಐಶ್ವರ್ಯ ಮತ್ತು ಅನುಸೂಯಾಗೆ ಸದ್ಯ ಧಾರವಾಡದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

