Breaking News

ಬೆಂಗಳೂರು | 2 ಕೋಟಿ ರೂ. ದರೋಡೆ ಪ್ರಕರಣ : 15 ಆರೋಪಿಗಳ ಬಂಧನ, 1.11 ಕೋಟಿ ರೂ. ನಗದು ವಶ!

ನಗದು ಹಣವನ್ನು ಡಿಜಿಟಲ್ ಕರೆನ್ಸಿಯಾಗಿ ಬದಲಾವಣೆ ಮಾಡಿಕೊಡುವುದಾಗಿ ಉದ್ಯಮಿಯನ್ನು ನಂಬಿಸಿ 2 ಕೋಟಿ ರೂ. ಹಣ ಪಡೆದು ಬಳಿಕ ಅಪರಿಚಿತ ವ್ಯಕ್ತಿಗಳಿಂದ ದರೋಡೆಯಾಗಿದೆ ಎಂದು ಸುಳ್ಳು ದೂರು ನೀಡಿದ್ದ ವ್ಯಕ್ತಿ ಸೇರಿ ಒಟ್ಟು 15 ಮಂದಿ ಆರೋಪಿಗಳನ್ನು ಇಲ್ಲಿನ ವಿದ್ಯಾರಣಪುರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಸುಳ್ಳು ದೂರು ನೀಡಿದ್ದ ಶ್ರೀಹರ್ಷ ಹಾಗೂ ಆತನ ಸಹಚರರಾದ ರಕ್ಷಿತ್, ಚಂದ್ರಶೇಖರ, ರಾಕೇಶ್, ಬೆಂಜಮಿನ್ ಸಹಿತ ಒಟ್ಟು 15 ಮಂದಿ ಆರೋಪಿಗಳನ್ನು ಬಂಧಿಸಿ 1.11 ಕೋಟಿ ರೂ. ನಗದು, ಕೃತ್ಯಕ್ಕೆ ಬಳಸಿದ್ದ 4 ಕಾರುಗಳು, 4 ದ್ವಿಚಕ್ರವಾಹನಗಳು, 2 ಆಟೋಗಳು, 8 ಮೊಬೈಲ್ ಹಾಗೂ ಒಂದು ಲಾಂಗ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *