2024-25 ನೇ ಆರ್ಥಿಕ ವರ್ಷದಲ್ಲಿ ಅತೀ ಹೆಚ್ಚು ತಲಾ ಆದಾಯ ಹೊಂದಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಂಬರ್ 1 ಆಗಿದ್ದು ಇದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೊಗಳಿದ್ದಾರೆ. ಹಣಕಾಸು ಸಚಿವಾಲಯ ಸಲ್ಲಿಸಿದ ದತ್ತಾಂಶದಲ್ಲಿ ಕರ್ನಾಟಕದಲ್ಲಿ ತಲಾ ಆದಾಯ ಕಳೆದ 10 ವರ್ಷಗಳಲ್ಲಿ ದ್ವಿಗುಣವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.ಜನ ಸಾಮಾನ್ಯರನ್ನು ಸಬಲೀಕರಣಗೊಳಿಸಲು ಗ್ಯಾರಂಟಿ ಯೋಜನೆಗಳು ಸಹಾಯ ಮಾಡಿವೆ. ಗ್ಯಾರಂಟಿ ಯೋಜನೆಗಳು ದಿವಾಳಿ ಮಾಡುತ್ತವೆ ಎಂದು ಬಿಜೆಪಿ ಸುಳ್ಳು ಹರಡಿತ್ತು. ಆದರೆ ಈಗ ಕೇಂದ್ರ ಹಣಕಾಸು ಸಚಿವಾಲಯದ ದತ್ತಾಂಶವೇ ನಿಜಾಂಶ ಬಯಲು ಮಾಡಿದೆ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

