ಸರ್ಕಾರಿ ಇಂಜಿನಿಯರ್ ಒಬ್ಬರ ಮೃತದೇಹ ಅವರ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದ್ದು, ಡೆತ್ನೋಟ್ ಸಿಕ್ಕಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮೃತರನ್ನು ಜ್ಯೋತಿಷಾ ದಾಸ್ (30) ಎಂದು ಗುರುತಿಸಲಾಗಿದೆ. ಇವರು ಅಸ್ಸಾಂನಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ (ಪಿಡಬ್ಲ್ಯೂಡಿ) ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.ನಕಲಿ ಬಿಲ್ಗಳನ್ನು ಪಾಸ್ ಮಾಡಲು ಹಿರಿಯ ಅಧಿಕಾರಿಗಳು ತೀವ್ರ ಒತ್ತಡ ಹೇರಿದ್ದರಿಂದ ಸಾವಿಗೆ ಶರಣಾಗಿರುವುದಾಗಿ ಜ್ಯೋತಿಷಾ ಬರೆದಿದ್ದಾರೆ ಎನ್ನಲಾದ ಕೈಬರಹದ ಡೆತ್ನೋಟ್ ಪೊಲೀಸರಿಗೆ ಆಕೆಯ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ತನ್ನ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು ಜ್ಯೋತಿಷಾ ಉಲ್ಲೇಖಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

