ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್ ಕೃಷ್ಣರಾವ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಮುಂಭಾಗದಲ್ಲಿರುವ ಪಾದಾಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ.ವಲಯ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಲು ಸೂಚಿಸಿರುತ್ತಾರೆ. ಪರಿಶೀಲನೆಯ ವೇಳೆ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ, ಅದಕ್ಕೆ ಗ್ರೀನ್ ನೆಟ್ ಹಾಕಿ ನಾಗರಿಕರು ಓಡಾಡದ ಸ್ಥಿತಿ ಉಂಟಾಗಿರುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

