ರಸ್ತೆ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ಅರಂಭಿಸಿದ ಪರಿಣಾಮ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ಗಳಿಲ್ಲದೇ ಪರದಾಡಿದರು.ಹುಣಸಗಿ ಬಸ್ ನಿಲ್ದಾಣದಿಂದ ಒಂದು ಬಸ್ ಕೂಡ ರಸ್ತೆಗಳಿದಿಲ್ಲ. ಭಾನುವಾರ ರಾತ್ರಿ ಬಸ್ಗಳನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಮಹಾಂತಸ್ವಾಮಿ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಬಿಆರ್ ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
ನಗರ ಸಾರಿಗೆ ಮತ್ತು ರಸ್ತೆ ಸಾರಿಗೆ ಕೆಲವು ಬಸ್ ಗಳು ಸಂಚರಿಸುತ್ತಿವೆ. ವಿದ್ಯಾರ್ಥಿಗಳು ಮತ್ತು ಕಚೇರಿಗಳಿಗೆ ತೆರಳುವ ನೌಕರರು, ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

