ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ 1.14 ಲಕ್ಷ ನೌಕರರ ಪೈಕಿ 30 ಸಾವಿರಕ್ಕೂ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರಕ್ಕೆ ಬೆಂಬಲ ನೀಡಿದ್ದರು. ಆ ಹಿನ್ನೆಲೆಯಲ್ಲಿ ಗೈರಾಗಿದ್ದ ಎಲ್ಲ ನೌಕರರಿಗೂ ನೋಟಿಸ್ ನೀಡಿ, ಕರ್ತವ್ಯಕ್ಕೆ ಹಾಜರಾಗದಿರಲು ಕಾರಣ ತಿಳಿಸುವಂತೆ ಸೂಚಿಸಲಾಗಿದೆ.ಮಾಹಿತಿ ನೀಡಲಾಗಿತ್ತು. ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

