ಅಧಿಕಾರಿಗಳ ನಿರ್ಲಕ್ಷತನದಿಂದ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕೆಲಸಗಳು ನಡೆಯುತ್ತಿಲ್ಲವೆಂದು ಆರೋಪಿಸಿ ಗ್ರಾಮದ ಯುವಕರು ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜಾನುಕೊಂಡದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮ ಪಂಚಾಯಿತಿಗೆ ಶುಕ್ರವಾರ ಬೀಗ ಹಾಕಿ ಗ್ರಾಮದ ಯುವಕರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ,ಸ್ಥಳಕ್ಕೆ ತಾಲೂಕ್ ಪಂಚಾಯಿತಿ ಇಓ ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

