Breaking News

ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ: ಜನರ ದುಡ್ಡು ಜನರಿಗೆ ತಲುಪಿಸಿದ ಹೃದಯವಂತೆ!

ರಾಯಚೂರು ತಾಲೂಕಿನ ಬಿಜನಗೇರಾ ಆಂಜನೇಯ ದೇಗುಲ ನಿರ್ಮಾಣಕ್ಕಾಗಿ ವಯಸ್ಸಾದ ಭಿಕ್ಷುಕಿಯೊಬ್ಬರು1.83 ಲಕ್ಷ ರೂ. ದೇಣಿಗೆ ನೀಡಿಗಮನಸೆಳೆದಿದ್ದಾಳೆ. ಬಿಜನಗೇರಾ ಗ್ರಾಮದ 60 ವರ್ಷದ ರಂಗಮ್ಮಬಿಕ್ಷೆಎತ್ತಿದ್ದಬರೋಬ್ಬರಿ 1.83 ಲಕ್ಷ ರೂಪಾಯಿಹಣವನ್ನುಊರಿನಆಂಜನೇಯ ದೇವಸ್ಥಾನ ಜೀರ್ಣೋದ್ಧಾರಕ್ಕೆನೀಡಿದ್ದಾಳೆ. ಈಮೂಲಕಭಿಕ್ಷಾಟನೆ ಹಣದಲ್ಲಿ ಮಜಾ ಉಡಾಯಿಸೋರ ಮಧ್ಯೆ ಜನರ ದುಡ್ಡು ಜನರಿಗೆ ತಲುಪಿಸಿದ ಹೃದಯವಂತೆಎನಿಸಿಕೊಂಡಿದ್ದಾಳೆ.

ಕಳೆದ ಆರು ವರ್ಷಗಳಿಂದ ಬಿಕ್ಷಾಟನೆಯಿಂದ ಬಂದಿದ್ದ ಹಣವನ್ನು ಮೂರು ಗೋಣಿ ಚೀಲದಲ್ಲಿ ಸಂಗ್ರಹಿಸಿಟಿದ್ದ ನೋಟುಗಳು, ಚಿಲ್ಲರೆ ಹಣವನ್ನು 20 ಕ್ಕು ಹೆಚ್ಚು ಜನರು ಬರೋಬ್ಬರಿ 6 ಗಂಟೆಗಳ ಕಾಲ ಎಣಿಕೆ ಮಾಡಿದ್ದಾರೆ.ಈ ವೇಳೆ ಗೋಣಿ ಚೀಲದಲ್ಲಿ ತೇವಗೊಂಡಿದ್ದ 20 ಸಾವಿರ ಮೌಲ್ಯದ ನೋಟುಗಳು ಹಾಳಾಗಿರುವುದುಕಂಡುಬಂದಿದೆ. ಆಂಧ್ರ ಮೂಲದ ರಂಗಮ್ಮ 40 ವರ್ಷಗಳ ಹಿಂದೆಯೇ ಬಿಜ್ಜನಗೆರಾ ಗ್ರಾಮಕ್ಕೆ ಆಗಮಿಸಿದ್ದು, ಅಂದಿನಿಂದಲೇ ಭಿಕ್ಷಾಟನೆ ಮಾಡುತ್ತಿದ್ದಾಳೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *