ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ನೆನ್ನೆ ರಾತ್ರಿ (ಆ.8)ರಂದು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಂದು ಸೇನೆ ತಿಳಿಸಿದೆ. ಇದಕ್ಕೂ ಮೊದಲು ನಡೆದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.ವೀರ ಯೋಧರಾದ ಕೆ ಪ್ರೀತ್ಪಾಲ್ ಸಿಂಗ್ ಮತ್ತು ರ್ಮಿಂದರ್ ಸಿಂಗ್ ಅವರ ಈ ತ್ಯಾಗಕ್ಕೆ ಅವರನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಎಕ್ಸ್ ಮೂಲಕ ಸಂತಾಪ ಸೂಚಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

