ಮುಸ್ಲಿಂ ಯುವತಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ಅವರ ಮನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಈಶ್ವರಪ್ಪ ಭೇಟಿ ನೀಡಿದ್ದಾರೆ.ವಿಜಯಪುರ ಶಾಸಕ ಯತ್ನಾಳ್, ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ರೂಪಾಯಿ ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡುವಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ಇದೆ ಎಂದು ಟೀಕಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

