ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸಿಂಧನೂರು ಮುಖ್ಯರಸ್ತೆಯಲ್ಲಿ ಆ.13 ರಂದು ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ ಮೋತಿಲಾಲ್ ದೇಸಾಯಿ ಭೋಗಾಪುರ ಶುಕ್ರವಾರ ನಿಧನರಾಗಿದ್ದಾರೆ ಎಂದು ತುರ್ವಿಹಾಳ ಪೊಲೀಸರು ಖಚಿತಪಡಿಸಿದ್ದಾರೆ.ಅಪಘಾತಕ್ಕೀಡಾಗಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ವೆಂಕಟೇಶಗೆ ಕಾಲು ಮುರಿದಿದ್ದು ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದರಿಂದ ಗುಣಮುಖರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

