ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದರು.
ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ತುಂಗಭದ್ರಾ ಜಲಾಶಯ ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

