ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ವೃದ್ಧ ಜನರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾನೆ. ನಿವೃತ್ತ ಲೋಕೋ ಪೈಲಟ್ ಶಿವಕುಮಾರ್ (71 ವರ್ಷ) ವಂಚಿಸಿದ ಆರೋಪಿ.ಆರೋಪಿ ಶಿವಕುಮಾರ ರಾಮನಗರದ ಸಾವಿತ್ರಮ್ಮ ಎಂಬುವರ ಬಳಿ 8.65 ಲಕ್ಷ ನಗದು, 3 ಲಕ್ಷ ಮೌಲ್ಯದ 59 ಗ್ರಾಮ ಚಿನ್ನಭರಣ ಪಡೆದಿದ್ದಾನೆ. ಬಳಿಕ, ಶಿವಣ್ಣ ಎಂಬುವರಿಂದ 4 ಲಕ್ಷ 50 ಸಾವಿರ ರೂ. ಹಣ ಪಡೆದಿದ್ದಾನೆ. ನಂತರ, ಇವರಿಗೆಲ್ಲ ರೈಲ್ವೆ ಇಲಾಖೆಯ ನಕಲಿ ಸೀಲ್ ಹಾಗೂ ಸೈನ್ ಮಾಡಿ office person department southwest railway, keshavapura post, gadag road, hubli-23 ಯಿಂದ ಪೋಸ್ಟ್ ಮಾಡಿದ್ದಾನೆ.ಕೇವಲ ರಾಮನಗರ ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆಗಳಲ್ಲೂ ಆರೋಪಿ ಶಿವಕುಮಾರ್ ತನ್ನ ಕರಾಮತ್ತನ್ನು ತೋರಿಸಿದ್ದಾನೆ ಎನ್ನಲಾಗಿದೆ. ಒಟ್ಟಾರೆಯಾಗಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ದೋಖಾ ಮಾಡಿದ್ದು, ಪೊಲೀಸರ ತನಿಖೆಯಿಂದ ಮತ್ತಷ್ಟು ಸತ್ಯಾಸತ್ಯತೆ ಹೊರಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

