ಪ್ರಕರಣವೊಂದರಲ್ಲಿ ಬಂಧನ ವಾರಂಟ್ನೊಂದಿಗೆ ಹಾಲಪ್ಪ ಅವರು ಹೆಡ್ಕಾನ್ಸ್ಟೆಬಲ್ ಮತ್ತು ಕಾನ್ಸ್ಟೆಬಲ್ ಜತೆಯಲ್ಲಿ ಇದೇ 17ರಂದು ರಾಜಸ್ಥಾನಕ್ಕೆ ತರಳಿದ್ದರು.ಜೋಧಪುರದಲ್ಲಿ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿಯವರಾದ ಹಾಲಪ್ಪ ಅವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅವರ ಮೃತದೇಹವನ್ನು ಗುರುವಾರ ಇಲ್ಲಿಗೆ ತರುವ ನಿರೀಕ್ಷೆ ಇದ್ದು, ಸ್ವಗ್ರಾಮ ಹಿರೇಹಡಗಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

