ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೆಸ್ತೂರು ಬಳಿಯ ದುಂಡನಹಳ್ಳಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದೆ. ಕಳ್ಳತನದ ಆರೋಪದ ಮೇಲೆ ರಮೇಶ್ನನ್ನು ಎಂಕೆ ದೊಡ್ಡಿ ಪೊಲೀಸರು ಬಂಧಿಸಿದ್ದರು. ಆದರೆ ಬಳಿಕ ರಮೇಶ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

