ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ಮಹಿಳೆ ತನ್ನ ಪತಿ ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಯಿಂದ ಬಳಲುತ್ತಿದ್ದಾರೆ. ಅವರ ಜೊತೆ ಯಾವುದೇ ಶಾರೀರಿಕ ಸಂಬಂದ ಹೊಂದಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಳು. 90 ಲಕ್ಷ ರೂಪಾಯಿ ಶಾಶ್ವತ ಜೀವನಾಂಶ ನೀಡುವಂತೆ ಮನವಿ ಸಲ್ಲಿಸಿದ್ದಳು.ಅರ್ಜಿದಾರಳು ತನ್ನ ಪತಿ ದುರ್ಬಲ, ಶಾರೀರಿಕ ಕ್ರಿಯೆ ನಡೆಸಲು ಅಸಮರ್ಥ, ನನಗೆ ಹಿಂಸೆ ನೀಡುತ್ತಿದ್ದಾನೆ ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಅಲ್ಲದೆ 90 ಲಕ್ಷ ಶಾಶ್ವತ ಜೀವನಾಂಶಕ್ಕೆ ಅರ್ಹಳು ಎಂದು ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಮೌಸುಮಿ ಭಟ್ಟಾಚಾರ್ಯ ಮತ್ತು ಬಿ.ಆರ್. ಮಧುಸೂದನ್ ರಾವ್ ಪೀಠ ಮಹಿಳೆ ಅರ್ಜಿಯನ್ನು ವಜಾಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

