ಹಾಸನದಲ್ಲಿ ಕೆಲ ತಿಂಗಳ ಹಿಂದೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದವು. ಅನೇಕ ಜನರು ಹೃದಯಾಘಾತಕೆ ಬಲಿ ಆಗಿದ್ದರು. ಈ ವಿಚಾರ ರಾಜ್ಯದಲ್ಲಿ ಸಹ ಆತಂಕವನ್ನ ಹೆಚ್ಚು ಮಾಡಿತ್ತು. ಈ ವಿಚಾರವನ್ನ ತನಿಖೆ ಮಾಡಲು ಸರ್ಕಾರ ಸಮಿತಿ ಸಹ ರಚನೆ ಮಾಡಿತ್ತು. ಅದರ ವರದಿಯಲ್ಲಿ ಹೃದಯಾಘಾತಕ್ಕೆ ಕಾರಣವನ್ನ ತಿಳಿಸಿತ್ತು. ಮಾಹಿತಿ ಪ್ರಕಾರ ಮೇ ಹಾಗೂ ಜೂನ್ ತಿಂಗಳಿನಲ್ಲಿ ಒಟ್ಟು 24 ಜನರು ಹೃದಯಾಘಾತದಿಂದ ಸತ್ತಿದ್ದಾರೆ ಎನ್ನಲಾಗಿತ್ತು. ಇನ್ನು 24 ಜನರಲ್ಲಿ 20 ಜನರಿಗೆ ಹೃದಯಾಘಾತ ಆಗಿ ಸಾವನ್ನಪ್ಪಿದ್ದಾರೆ ಎಂದು ಸಮಿತಿ ಹೇಳಿದ್ದು, ಉಳಿದ 4 ಜನರಲ್ಲಿ ಹೃದಯಾಘಾತವಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

