ರಾಜ್ಯದಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳ ಸುದ್ದಿ ಹೆಚ್ಚಾಗುತ್ತಿದೆ. ಒಂದೆಲ್ಲಾ ಒಂದು ಹೃದಯಾಘಾತದಿಂದ ಸಾವು ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಇದೀಗ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.ಪೊಲೀಸರು ದಾಳಿ ಮಾಡಿದ ಕಾರಣದಿಂದ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತ ಜಾಗದಲ್ಲಿಯೇ ಉಸಿರು ಚೆಲ್ಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

