ಶ್ರೀನಿವಾಸಪುರ ತಾಲ್ಲೂಕಿನ ಗೌಡತಾತಗಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಿ.ಮಂಜುನಾಥ್ ಅವರಿಗೆ ಈ ಬಾರಿ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಲಭಿಸಿದೆ.ಶಾಲೆಯು ಕರ್ನಾಟಕ-ಆಂಧ್ರ ಪ್ರದೇಶದ ಗಡಿಭಾಗದಲ್ಲಿದ್ದು, ಸೌಲಭ್ಯಗಳ ಕೊರತೆ ನಡುವೆಯೇ ಮಕ್ಕಳನ್ನು ಆಕರ್ಷಿಸುವಂತೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ.ಜಿ.ಮಂಜುನಾಥ್ ಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌಡತಾತಗಡ್ಡಭರವಸೆ ಇಟ್ಟು ಪ್ರಶಸ್ತಿ ಕೊಟ್ಟಿದ್ದು ಅದನ್ನು ಉಳಿಸಿಕೊಳ್ಳಬೇಕು. ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಶಾಲಾ ಶಿಕ್ಷಣ ಇಲಾಖೆಯವರು ನನ್ನನ್ನು ಗುರುತಿಸಿರುವುದು ಖುಷಿ ಉಂಟು ಮಾಡಿದೆಈ ಪ್ರಶಸ್ತಿಯನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳು ವರ ಪೋಷಕರು ಹಾಗೂ ಬಾಲ್ಯದ ಶಿಕ್ಷಕ ಗೋವಿಂದಪ್ಪ ಅವರಿಗೆ ಅರ್ಪಿಸುತ್ತೇನೆ ಎಂದು ಮಂಜುನಾಥ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

