ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ಎಗ್ಗಿಲ್ಲದೆ ಒಸಿ ಮಟ್ಕಾ ದಂಧೆ ನಡೆಯುತ್ತಿದೆ. ಯಾವುದೇ ಪೊಲೀಸರ ಭಯ ಇಲ್ಲದೆ ಮಟ್ಕಾ ದಂಧೆ ನಡೆಸುತ್ತಿದ್ದಾರೆ. ಕಂಪ್ಲಿ ಪಟ್ಟಣ ಒಂದರಲ್ಲಿಯೇ ಐದು ಮಟ್ಕಾ ಪಾಯಿಂಟ್ ಗಳಲ್ಲಿ ಈ ಒಂದು ದಂಧೆ ನಡೆಸಲಾಗುತ್ತಿದೆ.ಅಷ್ಟೆ ಅಲ್ಲದೇ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಮಟ್ಕಾ ದಂಧೆ ನಡೆಯುತ್ತಿದ್ದು, ಪೊಲೀಸರು ಇದಕ್ಕೆ ಸಾತ್ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಇದನ್ನು ಬಯಲು ಮಾಡಲು ಸ್ಥಳೀಯ ನಿವಾಸಿ ನಾರಾಯಣ ಸ್ವಾಮಿ ತೆರಳಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ದಂಧೆಯ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಮಟ್ಕಾ ದಂದೆಕೋರರು ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ಹಲ್ಲೆಗೆ ಒಳಗಾದಂತಹ ನಾರಾಯಣ ಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

