Breaking News

ಬಳ್ಳಾರಿ : ಪೊಲೀಸ್ ಠಾಣೆ ಕೂಗಳತೆಯಲ್ಲೇ ಒಸಿ, ಮಟ್ಕಾ ದಂಧೆ : ಮೊಬೈಲಲ್ಲಿ ಚಿತ್ರೀಕರಿಸಿದ ವ್ಯಕ್ತಿ ಮೇಲೆ ಹಲ್ಲೆ!

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ ಎಗ್ಗಿಲ್ಲದೆ ಒಸಿ ಮಟ್ಕಾ ದಂಧೆ ನಡೆಯುತ್ತಿದೆ. ಯಾವುದೇ ಪೊಲೀಸರ ಭಯ ಇಲ್ಲದೆ ಮಟ್ಕಾ ದಂಧೆ ನಡೆಸುತ್ತಿದ್ದಾರೆ. ಕಂಪ್ಲಿ ಪಟ್ಟಣ ಒಂದರಲ್ಲಿಯೇ ಐದು ಮಟ್ಕಾ ಪಾಯಿಂಟ್ ಗಳಲ್ಲಿ ಈ ಒಂದು ದಂಧೆ ನಡೆಸಲಾಗುತ್ತಿದೆ.ಅಷ್ಟೆ ಅಲ್ಲದೇ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಮಟ್ಕಾ ದಂಧೆ ನಡೆಯುತ್ತಿದ್ದು, ಪೊಲೀಸರು ಇದಕ್ಕೆ ಸಾತ್ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ಇದನ್ನು ಬಯಲು ಮಾಡಲು ಸ್ಥಳೀಯ ನಿವಾಸಿ ನಾರಾಯಣ ಸ್ವಾಮಿ ತೆರಳಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ದಂಧೆಯ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಮಟ್ಕಾ ದಂದೆಕೋರರು ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ಹಲ್ಲೆಗೆ ಒಳಗಾದಂತಹ ನಾರಾಯಣ ಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *