ನಗರದ ಪ್ರಿಯಾಂಕಾ ಮಹಿಳಾ ಮತ್ತಿನ ಸಹಕಾರ ಸಂಘದ ಅಧ್ಯಕ್ಷೆ ಪ್ರಿಯಾಂಕಾ ಜೈನ್ ಅವರಿಗೆ ನೀಡಿರುವ ಜಾಮೀನು ರದ್ದುಪಡಿಸಿ ಪೊಲೀಸ್ ಕಸ್ಟಡಿಗೆ ನೀಡಬೇಕು, ಈ ವಂಚನೆಗೆ ಪ್ರೇರಣೆ ಎನ್ನಲಾದ ಶ್ರೀ ತಾಯಮ್ಮ ಮಹಿಳಾ ಶಕ್ತಿ ಸಂಘದ ಅಧ್ಯಕ್ಷರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಸಿಪಿಎಂ ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 300ಕ್ಕೂ ಅಧಿಕ ಮಹಿಳೆಯರಿಗೆ ಕೋಟ್ಯಂತರ ಹಣ ವಂಚಿಸಲಾಗಿದೆ, ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ದೂರು ಸಲ್ಲಿಸಿರುವವರ ಅಭಿಪ್ರಾಯ ಪರಿಗಣಿಸಿ ಪ್ರತ್ಯೇಕ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಭಾಸ್ಕರ ರೆಡ್ಡಿ, ಮುಖಂಡರಾದ ಎ.ಕರುಣಾನಿಧಿ, ಮರಡಿ ಜಂಬಯ್ಯ ನಾಯಕ, ಈಡಿಗರ ಮಂಜುನಾಥ, ವಿ.ಸ್ವಾಮಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

