ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದರು. ಬಳಿಕ ನ್ಯಾಯಾಲಯವು ಸಿಬಿಐಗೆ ನೋಟಿಸ್ ಜಾರಿಗೊಳಿಸಿ ಸೆ.9ಕ್ಕೆ ವಿಚಾರಣೆ ಮುಂದೂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

