ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಗಲಭೆ ನಡೆದಿದ್ದು, ಅದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗಲಭೆಗೆ ಕಾರಣರಾದವರನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿದ್ದು, ಈ ವಿಷಯದಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಘಟನೆಯ ಕುರಿತು ಪ್ರತಾಪ್ ಸಿಂಹ ಅವರು ಮಾತನಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಯತ್ನಾಳ್, ಹಿಂದೂ ಯುವಕರನ್ನು ಬಂಧಿಸಿದ್ದರೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

