ನಗರದ ಹೊರವಲಯದ ಬೈಕಂಪಾಡಿಯಲ್ಲಿರುವ ಅರೋಮೇಜನ್ ಸುಗಂಧ ದ್ರವ್ಯ ಕಾರ್ಖಾನೆಗೆ ಬುಧವಾರ ನಸುಕಿನಲ್ಲಿ ಬೆಂಕಿ ತಗುಲಿದ್ದು, ಅದರಲ್ಲಿ ದಾಸ್ತಾನು ಮಾಡಿದ್ದ ಸುಗಂಧದ್ರವ್ಯ ಹಾಗೂ ಅದನ್ನು ತಯಾರಿಸುವ ಸಾಮಗ್ರಿಗಳು ಸಂಪೂರ್ಣ ನಾಶವಾಗಿವೆ.ಕಾರ್ಖಾನೆಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಎಂಸಿಎಫ್ ಸಿಬ್ಬಂದಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.ಶಾರ್ಟ್ ಸರ್ಕೀಟ್ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಮೂಲಗಳು ತಿಳಿಸಿವೆ. ಈ ಬೆಂಕಿ ಅವಘಡದಿಂದ ಸುಮಾರು₹ 4 ಕೋಟಿ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

