ಹರಿದ್ವಾರದಲ್ಲಿ ಹಿರಿಯರ ಅಸ್ಥಿ ವಿಸರ್ಜನೆ ಮಾಡಿ ಹಿಂದಿರುಗುತ್ತಿದ್ದ ಕಾರ್ ಅಪಘಾತಕ್ಕೊಳಗಾಗಿ ಏಳು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ಜೈಪುರದ ಶಿವದಾಸಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆ ಎಷ್ಟಿತ್ತೆಂದ್ರೆ ಕಾರ್ನಲ್ಲಿದ್ದ ಎಲ್ಲಾ ಏಳು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಅಪಘಾತಕ್ಕೊಳಗಾದ ಕಾರ್ ತೆರವುಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

