ಸ್ನಾನಕ್ಕೆ ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಶಿಸಿ 9ನೇ ತರಗತಿ ವಿದ್ಯಾರ್ಥಿನಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಡೆದಿದೆ.ಕೆ.ಎಚ್. ಭಾಗ್ಯಶ್ರೀ (15) ಮೃತಪಟ್ಟ ಬಾಲಕಿ.ಶಾಕ್ ಹೊಡೆದ ರಭಸಕ್ಕೆ ಭಾಗ್ಯಶ್ರೀ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಕುಟುಂಬ ಸದಸ್ಯರು ಆಕೆಯನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಕರೆ ತಂದರೂ, ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

